ದಶಕಗಳ ಹಿಂದಿನಿಂದ ಪಾಕಿಸ್ತಾನದ ವಿರುದ್ಧ ಹೋರಾಟ ನಡೆಸುತ್ತಿರುವ ಬಲೂಚ್ ಪ್ರತ್ಯೇಕತಾವಾದಿಗಳಿಗೆ ಬಲ ನೀಡುವಂತ ಬೆಳವಣಿಗೆಯೊಂದರಲ್ಲಿ, ಬುಧವಾರ ಬಲೂಚಿಸ್ತಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಣೆ ಮಾಡಲಾಗಿದೆ.
ಭಾರತೀಯರೆಲ್ಲರೂ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಧರ್ಮಾತೀತವಾಗಿ ಸಂಭ್ರಮಿಸುವ ಅತ್ಯಂತ ಸಂತಸದ ಕ್ಷಣ ಇದಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.
ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯಂಕರ ಉಗ್ರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆಯು ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಮತ್ತು ಪಾಕಿಸ್ತಾನದ ಒಳನಾಡಿನ ಉಗ್ರ ನೆಲೆಗಳ ಮೇಲೆ ಸ್ಪೋಟಕ-ಸಜ್ಜುಡಿದ ಡ್ರೋನ್ಗಳು ಮತ್ತು ನಿಖರ ಕ್ಷಿಪಣಿ ದಾಳಿ ನಡೆಸಿದೆ. 'ಆಪರೇಷನ್ ಸಿಂಧೂರ್' ಎಂಬ ಹೆಸರಿನ ಈ ಕಾರ್ಯಾಚರಣೆಯಲ್ಲಿ ಕೋಟ್ಲಿ, ಬಹ್ವಲ್ಪುರ್, ಮುಜಫರಾಬಾದ್ ಮತ್ತು ಮುರಿಡ್ಕೆ ಪ್ರದೇಶಗಳಲ್ಲಿರುವ ಒಟ್ಟು 9 ಉಗ್ರ ಅಡಗುತಾಣಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ.