ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರದ ನಿರ್ದೇಶನ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ₹5 ಲಕ್ಷ ಠೇವಣಿ ಇರಿಸುವಂತೆ ಸೂಚಿಸಿದೆ.
ಹಲವಾರು ವಿವಾದಗಳಿಗೆ ಕಾರಣವಾದ ಬೈಲೂರು ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಮತ್ತೆ ನೈಜ ಕಂಚಿನ ಪರಶುರಾಮ ಪ್ರತಿಮೆ ಪ್ರತಿಷ್ಟಾಪನೆಗಾಗಿ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಬೈಲೂರಿನ ಹಿರಿಯ ಮುಖಂಡರಾದ ಸುಧೀರ್ ಹೆಗ್ಡೆ ಸ್ವಾಗತಿಸಿದ್ದಾರೆ.
ಪರಶುರಾಮ ಥೀಂ ಪಾರ್ಕ್ ಬಗ್ಗೆ ಇಲ್ಲಸಲ್ಲದ ಅಪಸ್ವರ ಎತ್ತಿ ಯೋಜನೆಯ ಅನುಷ್ಠಾನ ವಿಳಂಬವಾಗುವುದಕ್ಕೆ ಹಾಗೂ ಪ್ರವಾಸೋದ್ಯಮ ಕುಂಟಿತಗೊಳ್ಳುವುದಕ್ಕೆ ಉದಯಕುಮಾರ್ ಶೆಟ್ಟಿಯವರ ರಾಜಕೀಯ ಅವಕಾಶವಾದಿತನವೇ ಕಾರಣವಾಗಿದ್ದು, ಕಾರ್ಕಳದ ಜನತೆ ಈ ದ್ರೋಹವನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ.