GST ವಿಚಾರದಲ್ಲಿ ಕೇಂದ್ರ ಸರ್ಕಾರದ ಹಠಾತ್ ನಿರ್ಧಾರವು ಆಳುವವರ ಅಭದ್ರತೆಯನ್ನು ಸೂಚಿಸುತ್ತದೆ, ಇದು ದೀಪಾವಳಿಯ ಕೊಡುಗೆಯಲ್ಲ, ಬದಲಾಗಿ ಇದು ತಪ್ಪನ್ನು ತಿದ್ದಿಕೊಂಡಿರುವುದಷ್ಟೇ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ವ್ಯಾಖ್ಯಾನಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ತಲುಪಿದ್ದು ಈ ಐತಿಹಾಸಿಕ ಸಾಧನೆಯನ್ನು ಕಾರ್ಕಳ ಕಾಂಗ್ರೆಸ್ ವತಿಯಿಂದ ವಿಶಿಷ್ಟವಾಗಿ ಆಚರಿಸಲಾಯಿತು.
ಕಾಂಗ್ರೆಸ್ ನಾಯಕರಾಗಿರುವ ಮಾನ್ಯ ಶ್ರೀ ಉದಯ್ ಶೆಟ್ಟಿ ಮುನಿಯಾಲುರವರ ಹುಟ್ಟುಹಬ್ಬದ ಪ್ರಯುಕ್ತ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಬಂಡೀಮಠ ಮೂಡು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.