ಭಾರಿ ಮಳೆಯ ನಡುವೆ ಉಡುಪಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲೆದಾಡುತ್ತಿದ್ದ ಹೊರರಾಜ್ಯದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ವಿಶುಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ, ಚಿಕಿತ್ಸೆ ಕೊಡಿಸಿ ರಾಜ್ಯ ಮಹಿಳಾ ನಿಲಯಕ್ಕೆ ದಾಖಲಿಸಿದ್ದರು.
ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಕರ್ನಾಟಕ ಇದರ ಆಶ್ರಯದಲ್ಲಿ ಶಾಂತಿ ಯುವಕ ಮಂಡಲ ಜಾರ್ಕಳ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಹಿಂದೂ ಗ್ರಾಮ ಸಂರಕ್ಷಣಾ ಸಮಿತಿ ಬೈಲೂರು, ವಿಶ್ವಕರ್ಮ ಬ್ರಾಹ್ಮಣ ಸೇವಾ ಸಂಘ ಬೈಲೂರ್,ಹಾಗೂ ಓಂ ಶಕ್ತಿ ಫ್ರೆಂಡ್ಸ್ ನೀರೆ ಕೆರೆ ಪಲ್ಕೆ ಇವರ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿ ಯಶಸ್ವಿಯಾಗಿ ನಡೆಯಿತು.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದೆಂದೂರ್ ಕಟ್ಟೆ ಬಳಿ ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆಯೊಬ್ಬರು ಧಾರಾಕಾರ ಮಳೆಯಲ್ಲಿ ನೆನೆಯುತ್ತಾ ರಸ್ತೆ ಬದಿಯಲ್ಲಿ ದೀರ್ಘ ಸಮಯ ಕುಳಿತಿದ್ದವರನ್ನು ಸ್ಥಳೀಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ತಕ್ಷಣ ಸ್ಪಂದಿಸಿ ರಕ್ಷಣೆ ಮಾಡಿರುವ ಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಹತ್ತು ದಿನಗಳಿಂದ ಅಲೆಯುತ್ತಿದ್ದ, ಮಾನಸಿಕ ಅಸ್ವಸ್ಥತೆ ಹೊಂದಿದ ಅನುಮಾನಾಸ್ಪದ ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ಅವರು ಮಾನವೀಯತೆ ಮೆರೆದು ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕಲ್ಪಿಸಿದ್ದರು. ಸಂಬಂಧಿಕರ ಪತ್ತೆಯಾಗದ ಕಾರಣ, ಇದೀಗ ಆ ಮಹಿಳೆಯನ್ನು ನಿಟ್ಟೂರಿನ ಮಹಿಳಾ ನಿಲಯದಲ್ಲಿ ಸೇರ್ಪಡೆ ಮಾಡಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ನ 10 ವರ್ಷದ ಸೇವೆಯನ್ನು ಸನ್ಮಾನಿಸುತ್ತಾ, ಎಂಆರ್ ಜಿ ಗ್ರೂಪ್ನ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಫೌಂಡೇಶನ್ಗೆ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ