ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯಲ್ಲಿ ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಎನ್.ರಾಮಚಂದ್ರ ರಾವ್ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಶಾಲು ಹೊದೆಸಿ ಸನ್ಮಾನಿಸಿದರು.
ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್' ವಿಜೇತ ಮತ್ತು ಆಸ್ಕರ್ ಪ್ರಶಸ್ತಿ ವಿಜೇತ 'ಆರ್ಆರ್ಆರ್' ಚಿತ್ರದ 'ನಾಟು ನಾಟು' ಹಾಡಿಗೆ ಧ್ವನಿಯಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ತೆಲಂಗಾಣದ ಗಾಯಕ ರಾಹುಲ್ ಸಿಪ್ಲಿಗಂಜ್ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
ನಮ್ಮ ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆಗಳನ್ನು ಭರ್ಜರಿಯಾಗಿ ಕಡಿತಗೊಳಿಸಲಾಗಿದೆ. ಪ್ರತಿ ಬಾಟಲಿಯ ಮೇಲೆ ₹10 ರಿಂದ ₹100 ವರೆಗೆ ಬೆಲೆ ಇಳಿಕೆ ಮಾಡಲಾಗಿದ್ದು, ಇದರಿಂದ ಗ್ರಾಹಕರಿಗೆ ಮಾಸಿಕ ₹116 ಕೋಟಿಗಳಷ್ಟು ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.