ಧಾರ್ಮಿಕ ಕ್ಷೇತ್ರದ ಬಗ್ಗೆ ಯಾರೇ ಒಳ್ಳೆಯ ಮಾತುಗಳನ್ನಾಡಿದರೂ ಅವರ ಚಾರಿತ್ರ್ಯಹರಣ ಮಾಡುವ ಮೂಲಕ ಬಾಯಿ ಮುಚ್ಚಿಸುವ ಷಡ್ಯಂತ್ರ ರೂಪಿಸುತ್ತಿರುವ ಅಪಾಯಕಾರಿ ರೌಡಿ ಮನಸ್ಥಿತಿಯನ್ನು ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸಿ ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.
ದಿನಾಂಕ 08-08-2025ರಂದು ದೈವಾಧೀನರಾದ ರಂಗಭೂಮಿ, ಕಿರುತೆರೆ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ತಮ್ಮ ಸೇವೆ ಸಲ್ಲಿಸಿದ್ದ, "ಕೂಡ್ದಿ ಕಲಾವಿದೆರ್ - ಪೆರ್ಡೂರು" ಸಂಸ್ಥೆಯ ಸ್ಥಾಪಕರಾದ ಪೆರ್ಡೂರು ಪ್ರಭಾಕರ ಕಲ್ಯಾಣಿಯವರ ಸ್ಮರಣಾರ್ಥ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಇದರ ವತಿಯಿಂದ ಅಂಬಲಪಾಡಿ ಪ್ರಗತಿ ಸೌಧ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.