ಅಮೆರಿಕಾದ ಬೋಸ್ಟನ್ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.
ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ಒಂದು ದಿನದ ಕಾರ್ಯಗಾರವನ್ನು ಶ್ರೀ ವೆಂಕಟರಮಣ ದೇವ ಎಜುಕೇಶನ್ ಟ್ರಸ್ಟ್ ಕುಂದಾಪುರದ ಕಾರ್ಯದರ್ಶಿಗಳಾದ ಶ್ರೀ ಕೆ ರಾಧಾಕೃಷ್ಣ ಶೆಣೈ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.