ರೊ. ಪಿ ಹೆಚ್ ಎಫ್ ಸುರೇಶ್ ನಾಯಕ್ & ಸುಮ ಎಸ್ ನಾಯಕ್ ದಂಪತಿಗಳ ಮಗ ಶ್ರೀ ಸುಹಾಸ್ ನಾಯಕ್ & ಅಂಜಲಿ ಇವರ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ವಿಜೇತ ವಿಶೇಷ ಶಾಲೆಗೆ ಅವಶ್ಯಕವಿರುವ ಅಡುಗೆ ಪಾತ್ರೆಗಳನ್ನು ಹಸ್ತಾಂತರಿಸಲಾಯಿತು. ಹಾಗೂ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ನಗರದ ಮಿತ್ರ ಆಸ್ಪತ್ರೆಯ ಸಮೀಪ ಇಂದು ಬೆಳಗಿನ ಜಾವ ಮಾನಸಿಕ ಅಸ್ವಸ್ಥ ಯುವಕನೋರ್ವ ಸಾರ್ವಜನಿಕರ ಮನೆಗಳಿಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ವಿಶು ಶೆಟ್ಟಿ ಅಂಬಲಪಾಡಿ ಅವರು ಯುವಕನನ್ನು ರಕ್ಷಿಸಿ, ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
"ಸ್ಪೆಷಲ್ ಆಕ್ಷನ್ ಫೋರ್ಸ್" (SAF) ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಾಕುವವರ ಮೇಲೆ ತೀವ್ರ ನಿಗಾ ವಹಿಸುತ್ತಿದ್ದು, ಅದರ ಮೊದಲ ಹೆಜ್ಜೆಯಾಗಿ ಕಾರ್ಕಳದ ಯುವಕನೊಬ್ಬನನ್ನು ಬಂಧಿಸಿದೆ.