ವಿಟ್ಲ: ಇ.ಡಿ. ಅಧಿಕಾರಿಗಳಂತೆ ನಟಿಸಿ ಬೀಡಿ ಉದ್ಯಮಿಯ ಮನೆಯಿಂದ 30 ಲಕ್ಷ ರೂ. ದರೋಡೆ

Date:

spot_img

ವಿಟ್ಲ: ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಗ್ರಾಮದಲ್ಲಿ, ಖತರ್ನಾಕ್ ಕಳ್ಳರ ತಂಡವೊಂದು ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳಂತೆ ಬಂದು 30 ಲಕ್ಷ ರೂ. ದರೋಡೆ ಮಾಡಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಲೈಮಾನ್ ಹಾಜಿ ಎಂಬವರು ಹಲವಾರು ವರ್ಷಗಳಿಂದ ಸಿಂಗಾರಿ ಬೀಡಿ ಸಂಸ್ಥೆಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದರು. ಕಳ್ಳರು ಇದನ್ನೇ ಗುರಿಯಾಗಿಸಿಟ್ಟುಕೊಂಡು ಮನೆಗೆ ಬಂದು ಹಣ ದೋಚಿದ್ದಾರೆ. ತಮಿಳುನಾಡು ಮೂಲದ ವಾಹನದಲ್ಲಿ ತಡರಾತ್ರಿ ಆಗಮಿಸಿದ ಆ ತಂಡ, ತಮ್ಮನ್ನು ಇ.ಡಿ. ಅಧಿಕಾರಿಗಳೆಂದು ಗುರುತಿಸಿಕೊಂಡು ಮನೆಗೆ ಪ್ರವೇಶ ಪಡೆದಿದ್ದಾರೆ. ಎರಡು ಗಂಟೆಗಳ ಕಾಲ ತೀವ್ರ ಹುಡುಕಾಟ ಮಾಡುವಹಾಗೆ ನಾಟಕ ಮಾಡಿದರು.

ಅಕ್ರಮ ಹಣ ವ್ಯವಹಾರ ಮತ್ತು ಅವ್ಯವಹಾರಗಳ ಆರೋಪಗಳನ್ನು ಸುಮ್ಮನೆ ತೋರಿಸಿ, ಮನೆಯವರಿಗೆ ಭಯ ಉಂಟುಮಾಡಿ, ತಂಡವು 30 ಲಕ್ಷ ರೂ. ಕೊಂಡೊಯ್ಯುವುದರಲ್ಲಿ ಯಶಸ್ವಿಯಾಯಿತು. ಈ ಘಟನೆಯ ಮಾಹಿತಿ ದೊರೆತ ಕೂಡಲೇ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಘಟನೆಯ ವಿವರ ತಿಳಿಯುತ್ತಿದ್ದಂತೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಕಳ್ಳರ ಈ ಹೊಸ ತಂತ್ರದ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸುತ್ತಿದ್ದಾರೆ. ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವಂತೆ ಭರವಸೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.