spot_img

ಕೊಳ್ಳೇಗಾಲದಲ್ಲಿ ಕೌಟುಂಬಿಕ ಕಲಹ: ಜಗಳದಲ್ಲಿ ತಂಗಿ ಕೊಲೆ

Date:

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಹೊಸ ವರ್ಷದ ದಿನದಂದು ನಡೆದ ಭೀಕರ ಘಟನೆಯೊಂದು ಜನರ ಮನಸ್ಸಿಗೆ ಮಸಿ ಬಳಿದಿದೆ. ತಮ್ಮ ಮಕ್ಕಳನ್ನು ಮಲಗಿಸಲು ಅಣ್ಣ ಮತ್ತು ತಂಗಿಯ ನಡುವಿನ ಜಗಳ ಅಂತಿಮವಾಗಿ ರಕ್ತಪಾತಕ್ಕೆ ಕಾರಣವಾಯಿತು. ಈ ಘಟನೆಯಲ್ಲಿ, ಸೈಯದ್ ಫರ್ಮಾನ್ (30) ಎಂಬ ವ್ಯಕ್ತಿ ತನ್ನ ತಂಗಿ ಐಮನ್ ಭಾನು (23) ಳನ್ನು ಚಾಕುವಿನಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಮಗುವನ್ನು ಮಲಗಿಸಲು ಜಗಳ

ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವೊಂದು ‘ನನಗೆ ನಿದ್ದೆ ಬರುತ್ತಿದೆ’ ಎಂದು ಹೇಳಿ ಮಲಗುವ ಕೋಣೆಗೆ ಹೋಗುತ್ತಿದಾಗ ಆರೋಪಿ ಸೈಯದ್ , ‘ನೀನು ನಿದ್ದೆ ಮಾಡುವಂತಿಲ್ಲ, ನಾನು ಊಟ ಮುಗಿಸುವವರೆಗೆ ಕಾಯಬೇಕು’ ಎಂದು ಬಲವಂತ ಪಡಿಸಿದ ಹಠ ಹಿಡಿದು, ಕಿರುಚಾಡಿ, ಮಗುವಿಗೆ ಸೌತೆಕಾಯಿ ತಿನ್ನಿಸುತ್ತಿದ್ದ ಎನ್ನಲಾಗಿದೆ.
ಅವರ ಸಹೋದರಿ ಐಮಾನ್ ಬಾನು ಮಧ್ಯಪ್ರವೇಶಿಸಿದರು. “ಅಣ್ಣ, ಮಗುವಿಗೆ ಈಗ ಜ್ವರ ಮತ್ತು ನೆಗಡಿ ಇದೆ, ಸೌತೆಕಾಯಿ ತಿನ್ನಿಸುವುದು, ಬೇಡ ಮಗು ಮಲಗಲಿ ಬಿಡು” ಎಂದು ಮನವಿ ಮಾಡಿದರು.
ಇದರಿಂದ ಕೋಪಿತಗೊಂಡ ಸೈಯದ್ ತನ್ನ ಸಹೋದರಿಯೊಂದಿಗೆ ಜಗಳವಾಡಿ ಅವಾಚ್ಯ ಶಬ್ದಗಳಿಂದ ಆಕೆಯನ್ನು ಬೈದಿದ್ದಾನೆ. ಸಿಟ್ಟಿನ ಭರದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ವರದಿಯಾಗಿದೆ.

ಕ್ರೂರ ಹತ್ಯೆ

ಕೋಪದಿಂದ ಅಡುಗೆ ಕೋಣೆಗೆ ಚಾಕು ತಂದು ತಂಗಿಯ ಕುತ್ತಿಗೆಗೆ ಇರಿದಿದ್ದಾನೆ. ಜಗಳ ಬಿಡಿಸಲು ಬಂದಿದ್ದ ಅತ್ತಿಗೆ ತಾಸೀಂ ತಾಜ್ ಅವರ ಮೇಲೂ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಿವಿ ಕತ್ತರಿಸಿ ಕಾಲು ಒತ್ತಿದ ಪರಿಣಾಮ ಗಂಭೀರ ಗಾಯಗಳಾಗಿವೆ. ಇದೇ ವೇಳೆ ತಂದೆ ಸೈಯದ್ ಪಾಷಾ ಜಗಳ ಬಿಡಿಸಲು ಮುಂದಾದಾಗ ಎಡಗೈ ಮುರಿದು ಚಾಕುವಿನಿಂದ ಗಾಯಗೊಳಿಸಿದ್ದಾನೆ.

ನೆರೆಹೊರೆಯವರ ಸಹಾಯ

ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಬಾಗಿಲು ಒಡೆದು ಒಳ ಬಂದು ಸೈಯದ್ ಫರ್ಮಾನ್‌ಗೆ ಬೀಗ ಹಾಕಿದರು. ಗಾಯಾಳುಗಳನ್ನು ಕೂಡಲೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಐಮಾನ್ ಭಾನು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಗಂಭೀರವಾಗಿ ಗಾಯಗೊಂಡ ತಾಸೀಂ ತಾಜ್ ಮತ್ತು ಸೈಯದ್ ಪಾಷಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಾರ್ವಜನಿಕ ಆಕ್ರೋಶ ಮತ್ತು ಪೊಲೀಸ್ ತನಿಖೆ

ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಆಸ್ಪತ್ರೆ ಎದುರು ಸಾವಿರಾರು ಜನ ಜಮಾಯಿಸಿದ್ದರು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗಿದೆ.

ಘಟನೆ ಕುರಿತು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಮುಂದಿನ ಕಾನೂನು ಕ್ರಮಕ್ಕೆ ಕ್ರಮ ಕೈಗೊಳ್ಳಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ನಾರಾಯಣ ಗುರು ಜಯಂತಿ

ಜ್ಞಾನ ಮತ್ತು ಸಮಾನತೆಯ ಪುನರುತ್ಥಾನಕ್ಕೆ ಪ್ರೇರಣೆಯ ದಿನಪ್ರತಿ ವರ್ಷ ಸೆಪ್ಟೆಂಬರ್ 7, ಭಾರತದ ಕರಾವಳಿ ತೀರದ ಜನತೆಗೆ ಒಂದು ಪವಿತ್ರ ಮತ್ತು ಮಹತ್ವದ ದಿನ

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಂಗ ಬಂಧನಕ್ಕೆ, ಶಿವಮೊಗ್ಗ ಜೈಲಿಗೆ ರವಾನೆ

'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಐಸಿಸಿ ಮತ್ತು Google Pay ಜಂಟಿ ಪ್ರಯತ್ನ: ಮಹಿಳಾ ವಿಶ್ವಕಪ್ ಟಿಕೆಟ್ ಮಾರಾಟಕ್ಕೆ ಹೊಸ ಡಿಜಿಟಲ್ ಸ್ಪರ್ಶ

ವಿಶೇಷ ಟಿಕೆಟ್‌ಗಳು ಗೂಗಲ್ ಪೇ ಮೂಲಕ ಸೆಪ್ಟೆಂಬರ್ 8ರವರೆಗೆ ಲಭ್ಯವಿರಲಿದ್ದು, ಸೆಪ್ಟೆಂಬರ್ 9 ರಿಂದ ಎಂದಿನಂತೆ ಟಿಕೆಟ್ ಮಾರಾಟ ಪ್ರಾರಂಭವಾಗಲಿದೆ ಎಂದು ICC ತಿಳಿಸಿದೆ.

ಸೈನಸ್ ಸಮಸ್ಯೆ: ಕರಿಮೆಣಸಿನ ಆವಿಯಿಂದ ಪರಿಹಾರ ಸಾಧ್ಯವೇ?

ಮೂಗು ಕಟ್ಟಿಕೊಂಡಾಗ ಅಥವಾ ಸೈನಸ್‌ಗಳಿಂದ ತಲೆನೋವು ಬಂದಾಗ ಬಿಸಿ ನೀರಿನ ಆವಿಗೆ ಕರಿಮೆಣಸು ಸೇರಿಸಿ ಉಸಿರಾಡುವುದು ಒಂದು ಜನಪ್ರಿಯ ವಿಧಾನ.