spot_img

ದೇಶದ ಭದ್ರತೆ ವಿಚಾರದಲ್ಲೂ ಗೋಸುಂಬೆಗಳ ತರಹ ವರ್ತಿಸುವ ಕಾಂಗ್ರೆಸ್: ರಾಕೇಶ್ ಶೆಟ್ಟಿ ಕುಕ್ಕುಂದೂರು

Date:

ಕಾರ್ಕಳ: ಕಾಶ್ಮಿರದ ಪೆಹಲ್ಗಾಮ್ ನಲ್ಲಿ ಹಿಂದೂಗಳ ಹತ್ಯೆ ದೇಶದ ಭದ್ರತೆ ಮತ್ತು ಭಯೋತ್ಪಾದಕರ ವಿರುದ್ಧದ ಕಠಿಣ ನಿರ್ಧಾರಗಳ ಕುರಿತು ಕಾಂಗ್ರೆಸ್ ಪಕ್ಷ ಗೋಸುಂಬೆ ರೀತಿ ವರ್ತಿಸುತ್ತಿದೆ. ಕಾಂಗ್ರೆಸ್ ಇನ್ನಾದರೂ ನರಿ ಬುದ್ದಿ ಬಿಟ್ಟು ದೇಶದ ಭದ್ರತೆ, ರಕ್ಷಣೆ ವಿಚಾರದಲ್ಲಿ ಒಗ್ಗಟ್ಟಿನ ಸ್ಪಷ್ಟ ನಿಲುವು ಪ್ರಕಟಿಸಲಿ ಎಂದು ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ.

ಕಾಂಗ್ರೆಸ್ ವರ್ತನೆ ತೀವೃ ಗೊಂದಲದಲ್ಲಿ ಇದ್ದಂತಿದೆ. ಪೆಹಲ್ಗಾಮ್ ಹಿಂದೂ ನಾಗರಿಕರ ಹತ್ಯೆಗೆ ಕೇಂದ್ರದ ಭದ್ರತಾ ವೈಫಲ್ಯವೆಂದು ಆರಂಭದಲ್ಲಿ ದೂರಿದ ಕಾಂಗ್ರೆಸ್ ನಂತರದಲ್ಲಿ ಯುದ್ಧ ಬದಲು ಶಾಂತಿ ಮಂತ್ರ ಜಪಿಸಿ ಭಯೋತ್ಪಾದಕರ ಪರ ಮೃದು ನಿಲುವು ತಳೆದಿತ್ತು. ಸಿ.ಎಂ ಸಿದ್ಧರಾಮಯ್ಯನವರಂತೂ ಯುದ್ಧ ಬೇಡ’ ಎಂದು ಪಾಕಿಸ್ತಾನ ಪರ ನುಡಿಯ ಹಾರೈಸಿದರು ಎಂದು ಅವರು ಕಿಡಿಕಾರಿದರು. ಕಾಂಗ್ರೆಸ್ ಪಾರ್ಟಿ, ರಾಷ್ಟ್ರೀಯ ಭದ್ರತೆ, ಸೈನಿಕರ ಹಿತಾಸಕ್ತಿ ಅಥವಾ ಪ್ರಧಾನಿಯ ನಿರ್ಧಾರಗಳ ಬಗ್ಗೆ ಬೆಂಬಲ ನೀಡುವ ಬದಲು, ತಪ್ಪು ಪ್ರಶ್ನೆಗಳನ್ನು ಎತ್ತುವ, ಗೊಂದಲ ಹುಟ್ಟಿಸುವ ರಾಜಕಾರಣವನ್ನು ಮಾಡುತ್ತ ಬಂದಿದೆ. ದೇಶ ಭಯೋತ್ಪಾದಕರ ವಿರುದ್ಧ ನಿರ್ಧಾರಾತ್ಮಕ ಕ್ರಮ ಕೈಗೊಂಡಿರುವ ಸಂದರ್ಭದಲ್ಲೂ, ಕಾಂಗ್ರೆಸ್ ದೇಶದ ಬದಿಗೆ ನಿಲ್ಲದೆ ನರಿ ಬುದ್ಧಿಯಲ್ಲಿ ಮುಳುಗಿದೆ. ನಿಜಕ್ಕೂ ಜನತೆ ಈ ನಾಟಕವನ್ನು ಸಹಿಸಲಾರರು ಎಂದ ಅವರು, ಕಾಂಗ್ರೆಸ್ ಪಕ್ಷ ‘ದ್ವಂಧ್ವ ರಾಜಕಾರಣ’ಕ್ಕೆ ಇತಿಶ್ರೀ ಹಾಡಿ ದೇಶ, ಕೇಂದ್ರ ಸರಕಾರ, ಸೈನಿಕರ ಪರ ಒಗ್ಗಟ್ಟಿನ ಕ್ಷಮತೆ ಪಾಲಿಸಿ, ಸರಕಾರದ ನಿರ್ಧಾರವನ್ನು ಬೆಂಬಲಿಸಲಿ ಎಂದು ಆಗ್ರಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪಾಕಿಸ್ತಾನಕ್ಕೆ ರಾಜನಾಥ್ ಎಚ್ಚರಿಕೆ: ಭಾರತದ ತಾಳ್ಮೆ ಪರೀಕ್ಷಿಸಿದರೆ ಗುಣಮಟ್ಟದ ಪ್ರತಿಕ್ರಿಯೆ ಅನಿವಾರ್ಯ!

ಭಾರತದ ತಾಳ್ಮೆಯನ್ನು ಪಾಕಿಸ್ತಾನ ಮತ್ತೆ ಪರೀಕ್ಷಿಸುವ ಪ್ರಯತ್ನ ಮಾಡಿದರೆ, ಇದು ದೇಶದಿಂದ 'ಗುಣಮಟ್ಟದ ಪ್ರತಿಕ್ರಿಯೆ'ಗೆ ದಾರಿ ಮಾಡಿಕೊಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ದಿನ ವಿಶೇಷ – ಯುರೋಪ್ ದಿನ

ಪ್ರತಿ ವರ್ಷ ಮೇ 9 ರಂದು ಯುರೋಪ್ ದಿನವನ್ನು ಆಚರಿಸಲಾಗುತ್ತದೆ, ಇದು ಯುರೋಪಿನಲ್ಲಿ ಶಾಂತಿ ಮತ್ತು ಏಕತೆಯನ್ನು ಆಚರಿಸುತ್ತದೆ.

ಮಂಗಳೂರಿನಲ್ಲಿ ಬೆಂಕಿ ಹಚ್ಚಲು ಬಿಜೆಪಿ ಮಾಡಿದ ಪ್ರಯತ್ನ ವಿಫಲ : ಸಚಿವ ಗುಂಡೂರಾವ್ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಸುಹಾಸ್ ಶೆಟ್ಟಿ ಪ್ರಕರಣದ ಹಿನ್ನಲೆಯಲ್ಲಿ ಬಿಜೆಪಿ ಮಂಗಳೂರಿನಲ್ಲಿ ಕೋಮು ಅಶಾಂತಿ ಉಂಟುಮಾಡುವ ಯತ್ನಕ್ಕೆ ಮುಂದಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸ್ವದೇಶ್ ದರ್ಶನ್ ಯೋಜನೆಯಡಿ ಕಾರ್ಕಳ ಆನೆಕೆರೆ-ರಾಮಸಮುದ್ರ ಪ್ರವಾಸೋದ್ಯಮ ಅಭಿವೃದ್ಧಿ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಘೋಷಣೆ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆನೆಕೆರೆ ಮತ್ತು ರಾಮಸಮುದ್ರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.