spot_img

ತೇಜಸ್ವಿ ಸೂರ್ಯ: 2025ರಲ್ಲಿ ವೈವಾಹಿಕ ಜೀವನ ಆರಂಭಿಸಲು ಸಿದ್ಧತೆ

Date:

spot_img

ಬೆಂಗಳೂರು: ಚೆನ್ನೈ ಮೂಲದ ಗಾಯಕಿ ಸಿವಶ್ರೀ ಸ್ಕಂದ ಪ್ರಸಾದ್ ಅವರ ಜೊತೆ ಯುವ ಸಂಸದ ತೇಜಸ್ವಿ ಸೂರ್ಯ ಸಪ್ತಪದಿ ತುಳಿಯಲಿದ್ದಾರೆ. ದಕ್ಷಿಣ ಲೋಕಸಭಾ ಕ್ಷೇತ್ರದ ಯಂಗ್ ಲೀಡರ್ ಮತ್ತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. 2025ರ ಮಾರ್ಚ್ 4ರಂದು ಅವರ ವಿವಾಹ ನಿಶ್ಚಯವಾಗಿದೆ ಎಂದು ಕುಟುಂಬ ಮೂಲಗಳಿಂದ ದೃಢಪಟ್ಟಿದೆ.

ಗಾಯಕಿ ಸಿವಶ್ರೀ ಸ್ಕಂದ ಪ್ರಸಾದ್ ಅವರು ಉತ್ತಮವಾಗಿ ಹಾಡುಗಳನ್ನು ಹಾಡುದರ ಜೊತೆಗೆ ಹರಿಕಥೆ, ಭಜನೆ, ಸೈಕ್ಲಿಂಗ್, ವಾಕ್‌ಥಾನ್ ಮೂಲಕ ಗಮನ ಸೆಳೆಯುತ್ತಾರೆ. ಕಳೆದ ವರ್ಷ ಪ್ರಧಾನಿ ಮೋದಿ ಅವರು ಸಿವಶ್ರೀ ಅವರು ಹಾಡಿದ ರಾಮಾಯಣ ಹಾಡು ಉತ್ತಮವಾಗಿ ಹಾಡಿದರೆಂದು ಟ್ವಿಟ್ಟರ್ ನಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದರು.

ಸಂಸದ ತೇಜಸ್ವಿ ಸೂರ್ಯ ಅವರು ರಾಜಕೀಯ ಪ್ರವೇಶಕ್ಕೂ ಮೊದಲೂ ಕಾನೂನು ಪದವಿ ಪಡೆದು ವಕೀಲಿ ವೃತ್ತಿ ಅಭ್ಯಾಸ ಮಾಡುತ್ತಿದ್ದರು. ಇದರ ಜೊತೆಗೆ ಬಿಜೆಪಿಯ ಸೋಶಿಯಲ್ ಮೀಡಿಯಾ ವಿಭಾಗದಲ್ಲಿ ಮೊದಲಿಗೆ ಕೆಲಸ ಮಾಡಿದ ಅನುಭವ ಅವರಿಗಿದೆ. ಇದಾದ ಮೇಲೆ ಬಿಜೆಪಿ ಪಕ್ಷದ ಪರವಾಗಿ ಮಾಧ್ಯಮಗಳ ಚರ್ಚೆಗಳಲ್ಲಿ ಭಾಗವಹಿಸಿ ತೇಜಸ್ವಿ ಸೂರ್ಯ ರಾಜಕೀಯ ಗಣ್ಯರ ಗಮನ ಸೆಳೆದಿದ್ದರು.

ಹೀಗಾಗಿಯೇ 2019ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಗೆಲುವು ಪಡೆದಿದ್ದರು.

ಲೋಕಸಭಾ ಕ್ಷೇತ್ರದಿಂದ 2024ರಲ್ಲಿ ಮತ್ತೆ ಸ್ಪರ್ಧಿಸಿ 2ನೇ ಬಾರಿಯು 34 ವರ್ಷದ ತೇಜಸ್ವಿ ಸೂರ್ಯ ಗೆಲುವು ಸಾಧಿಸಿ ಪ್ರಸ್ತುತ ಸಂಸದರಾಗಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.