spot_img

ಉಡುಪಿ: ಬಾಣಂತಿಯರ ಸಾವಿನ ಪ್ರಕರಣದಲ್ಲಿ ಸಚಿವರ ನಿರ್ಲಕ್ಷ್ಯ, ಸಚಿವರ ರಾಜೀನಾಮೆಗೆ ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ

Date:

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ವಿಚಾರವಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಾವುಗಳ ನೈಜ ಕಾರಣವನ್ನು ಹೊರತರುವ ಉದ್ದೇಶದಿಂದ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಸಂಧ್ಯಾ ರಮೇಶ್, ಕಳೆದ 19 ತಿಂಗಳಲ್ಲಿ 6 ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿರುವುದರೊಂದಿಗೆ 700 ಗರ್ಭಿಣಿಯರು ಮತ್ತು 1100ಕ್ಕೂ ಹೆಚ್ಚು ನವಜಾತ ಶಿಶುಗಳು ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ಜನನಿ ಸುರಕ್ಷಾ ಯೋಜನೆ ಹಾಗೂ ಜನನಿ ಶಿಶು ಸುರಕ್ಷಾ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಸ್ಥಿರ ಸ್ಥಿತಿ, ಸಿಬ್ಬಂದಿ ಕೊರತೆ ಮತ್ತು ಸರಕಾರದ ನಿರ್ಲಕ್ಷ್ಯವನ್ನು ಅವರು ತೀವ್ರವಾಗಿ ಟೀಕಿಸಿದರು. ಸಾವಿಗೀಡಾದ ಬಾಣಂತಿಯರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಮತ್ತು ಅನಾಥಗೊಂಡ ಮಕ್ಕಳ ಭವಿಷ್ಯದ ಹೊಣೆಗಾರಿಕೆ ಸರ್ಕಾರವೇ ಹೊರುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ ಮತ್ತು ಕಾರ್ಯದರ್ಶಿ ರಾಘವೇಂದ್ರ ಕುಂದರ್ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ತಡೆ: ಕಮಲ್ ಹಾಸನ್‌ಗೆ ಹೈಕೋರ್ಟ್ ಆದೇಶ

ನಟ ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ವಿವಾದ ಇತ್ಯರ್ಥವಾಗುವವರೆಗೆ ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ.

ಅತ್ರಾಡಿ ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಅತ್ರಾಡಿ ಶೇಡಿಗುಡ್ಡೆ ಬಳಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕೊರೊನಾ ಸೋಂಕಿನಿಂದ ಪೀಟರ್ ಮಥಾಯಸ್ ನಿಧನ: ತಹಶೀಲ್ದಾರ್ ಭೇಟಿನೀಡಿ ಸಾಂತ್ವನ

ಕಾಪು ತಾಲೂಕಿನ ಬೆಳ್ಳೆ ಗ್ರಾಮದ ನಿವಾಸಿ ಪೀಟರ್ ಮಥಾಯಸ್ (65) ಅವರು ಕೋವಿಡ್-19 ಪಾಸಿಟಿವ್ ದೃಢಪಟ್ಟ ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೂನ್ 2 ರಂದು ನಿಧನರಾದರು.

ಯೂರಿಕ್ ಆಸಿಡ್ ನಿಯಂತ್ರಣಕ್ಕೆ ಹಸಿ ಪಪ್ಪಾಯಿ – ನೈಸರ್ಗಿಕ ಮನೆಮದ್ದು!

ಅಧಿಕ ಯೂರಿಕ್ ಆಮ್ಲ ಸಮಸ್ಯೆ ಇತ್ತೀಚೆಗೆ ಸಾಮಾನ್ಯವಾಗಿದ್ದು, ಇದು ತಡವಾಗಿ ಗೋಚರಿಸುವ ಸಮಸ್ಯೆಯಾಗಿರುವುದರಿಂದ ಹೆಚ್ಚು ಮಂದಿಗೆ ಆರೋಗ್ಯದಲ್ಲಿ ಕಿರಿಕಿರಿ ಉಂಟುಮಾಡುತ್ತಿದೆ. ಈಗ, ಈ ಸಮಸ್ಯೆಗೆ ಹಸಿ ಪಪ್ಪಾಯಿ ಉತ್ತಮ ಮನೆಮದ್ದಾಗಿದೆ.