spot_img

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಗಲಭೆ, ಎಂಟು ಮಂದಿ ಅಯ್ಯಪ್ಪ ಮಾಲಾಧಾರಿಗಳ ಬಂಧನ

Date:

ಡಿ.29ರಂದು ರಾತ್ರಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಬಂದಿದ್ದ ಎಂಟು ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಲಾಟೆ ಮಾಡಿದ ಘಟನೆ ನಡೆದಿದೆ. ಈ ವೇಳೆ ಮಠದ ಸಿಬ್ಬಂದಿ, ದಿವಾನರು ಹಾಗೂ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಹೈದರಾಬಾದ್ ಮೂಲದ ಆರೋಪಿಗಳಾದ ಶಿವಕುಮಾರ್, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂದರ್ ಮತ್ತು ರವಿಕಾಂತ್ ಅವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರಗಳು
ಶ್ರೀಕೃಷ್ಣ ಮಠದ ಒಳಗೆ ಹಾಗೂ ರಥಬೀದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಈ ವೇಳೆ 7-8 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಲಾಟೆ ಮಾಡುತ್ತಿದ್ದರು ಎಂದು ವರದಿಯಾಗಿದೆ. ಉತ್ಸವ ಮೂರ್ತಿಯ ಪಲ್ಲಕ್ಕಿಯನ್ನು ಒಳಗೆ ಸ್ಥಳಾಂತರಿಸುತ್ತಿದ್ದಾಗ ಕೃಷ್ಣಮಠದ ಸಿಬ್ಬಂದಿ ಜಗದೀಶ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ.

ಜಗದೀಶ್ ಅವರನ್ನು ಎತ್ತಿ ಗರ್ಭಗುಡಿಯೊಳಗೆ ಕರೆದೊಯ್ದು ಗಲಾಟೆ ಮುಂದುವರಿಸಿದರು. ಈ ವೇಳೆ ಗಲಾಟೆ ತಡೆಯಲು ಮಠದ ದಿವಾನ ನಾಗರಾಜ ಆಚಾರ್ಯ ಮುಂದಾದಾಗ ಆರೋಪಿಗಳು ಅವರ ಮೇಲೂ ಹಲ್ಲೆ ನಡೆಸಿದ್ದಾರೆ.

ಪೊಲೀಸ್ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾರೆ
ಗಲಭೆ ನಿಯಂತ್ರಿಸಿ ಶಾಂತಿ ಕಾಪಾಡಲು ಪಿಆರ್‌ಒ ಹಾಗೂ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್‌ಸ್ಟೆಬಲ್ ರವೀಂದ್ರ ಮಧ್ಯ ಪ್ರವೇಶಿಸಿದರು. ಆದರೆ ಆರೋಪಿಗಳು ಅವರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾನೂನು ಕ್ರಮ
ಕಾನ್ಸ್ಟೇಬಲ್ ರವೀಂದ್ರ ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಇಂತಹ ಘಟನೆಗಳು ನಡೆಯದಂತೆ ಮಠದ ಸುತ್ತಮುತ್ತಲ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಲು ಕ್ರಮಕೈಗೊಳ್ಳಬೇಕಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಸಂಸದರ ಕಛೇರಿಯಲ್ಲಿ ಭೇಟಿಯಾದರು.

ವಿಮಾನ ದುರಂತದಲ್ಲಿ ಮೃತಪಟ್ಟ ನರ್ಸ್‌ ಮೇಲೆ ಅವಾಚ್ಯ ಪೋಸ್ಟ್ – ಕಾಸರಗೋಡು ಡೆಪ್ಯುಟಿ ತಹಶೀಲ್ದಾರ್ ಅಮಾನತು

ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ನಿಂದನೆ ಹಾಗೂ ಜಾತಿ ಆಧಾರಿತ ಟೀಕೆಗಳನ್ನು ಮಾಡಿದ್ದ ಹಿನ್ನೆಲೆಯಲ್ಲಿ ಕಾಸರಗೋಡು ಡೆಪ್ಯುಟಿ ತಹಶೀಲ್ದಾರ್ ಪವಿತ್ರನ್ ಅವರನ್ನು ಅಮಾನತು ಮಾಡಲಾಗಿದೆ.

ಆಸ್ತಿಗಾಗಿ ತಾಯಿ ಜೀವಂತವಿದ್ದರೂ ಮರಣ ಪ್ರಮಾಣಪತ್ರ ಪಡೆದ ಮಗನ ಬಂಧನ ; ಪುರಸಭೆ ಅಧಿಕಾರಿಗೂ ನೋಟೀಸು ಜಾರಿ

ತಾಯಿ ಜೀವಂತ ಇರುವಾಗಲೇ ಆಕೆ ಸಾವಿನ ಪ್ರಮಾಣಪತ್ರ ಪಡೆದು, ಆಸ್ತಿಯನ್ನು ತನ್ನ ಹೆಸರಿಗೆ ಪಡೆಯಲು ಯತ್ನಿಸಿದ ಪುತ್ರನನ್ನು ಶಿಗ್ಗಾಂವಿಯ ಪೊಲೀಸರು ಬಂಧಿಸಿದ್ದಾರೆ.

ಅಹಮದಾಬಾದ್ ವಿಮಾನ ದುರಂತದ ಕೆಲವು ಗಂಟೆಗಳ ಮೊದಲು ಮಿಡ್‌ಡೇನಲ್ಲಿ ಪ್ರಕಟವಾದ ಜಾಹೀರಾತು ವಿವಾದಕ್ಕೆ ದಾರಿ

ಗುಜರಾತಿ ಭಾಷೆಯ ಜನಪ್ರಿಯ ದೈನಿಕ 'ಮಿಡ್‌ಡೇ' ಪತ್ರಿಕೆಯ ಜೂನ್ 12ರ ಮೊದಲ ಪುಟದಲ್ಲಿ ಪ್ರಕಟವಾದ ಒಂದು ಜಾಹೀರಾತು ಈಗ ತೀವ್ರ ವಿವಾದಕ್ಕೀಡಾಗಿದೆ.