spot_img

ದಿನ ವಿಶೇಷ – ಸಚಿನ್ ತೆಂಡೂಲ್ಕರ್ ಹುಟ್ಟುಹಬ್ಬ

Date:

ಸಚಿನ್ ತೆಂಡೂಲ್ಕರ್

ಕ್ರಿಕೆಟ್ ಲೋಕದ ದೇವರು ಎಂದೇ ಗುರುತಿಸಲ್ಪಟ್ಟವರು. ಕ್ರಿಕೆಟ್ ತಿಳಿದಿರಲಿ, ತಿಳಿಯದೆ ಇರಲಿ, ಆದರೆ ಸಚಿನ್ ಹೆಸರು ತಿಳಿದೇ ಇರುತ್ತದೆ ಅಷ್ಟರಮಟ್ಟಿಗೆ ಹೆಸರು ಮೂಡಿಸಿದವರು. ಶ್ರದ್ಧೆ, ಆಸಕ್ತಿ, ಪರಿಶ್ರಮ, ಹಾಗೂ ವಿನಯ ಮತ್ತು ಪ್ರಾಮಾಣಿಕತೆ ಈ ಗುಣಗಳಿದ್ದರೆ ಯಾವುದನ್ನು ಕೂಡ ನಾವು ಸಾಧ್ಯವಾಗಿಸಬಹುದು ಎನ್ನುವುದಕ್ಕೆ ಸಚಿನ್ ನಿದರ್ಶನ. 11ನೇ ವಯಸ್ಸಿಗೆ ಕ್ರಿಕೆಟಿಗೆ ಕಾಲಿಟ್ಟ ಇವರು ತನ್ನ ಹದಿನಾರನೆಯ ವಯಸ್ಸಿನಲ್ಲಿ ಭಾರತದ ಪ್ರತಿನಿಧಿಯಾಗಿ ಆಡಲು ತೊಡಗಿದ್ದಾರೆ. ಭಾರತ ರತ್ನ ಪಡೆದ ಮೊದಲ ಆಟಗಾರ ಹಾಗೂ ತನ್ನ ಅತ್ಯಂತ ಕಿರಿಯಸ್ಸಿನಲ್ಲಿಯೇ ಭಾರತ ರತ್ನವನ್ನು ಪಡೆದುಕೊಂಡ ಹೆಗ್ಗಳಿಕೆ ಕೂಡ ಇವರಿಗೆ ಇದೆ.

ಕ್ರಿಕೆಟ್ ಲೋಕದಲ್ಲಿ ದಾಖಲೆಗಳ ಸರದಾರ ಎಂದೇ ಗುರುತಿಸಲ್ಪಟ್ಟಿದ್ದಾರೆ. 90ರ ಆಸು ಪಾಸಿನಲ್ಲಿ ಔಟ್ ಆಗುವುದರಿಂದ ಹಿಡಿದು ಶತಕಗಳ ತನಕ ಅಲ್ಲದೆ ಸಾವಿರಾರು ರನ್ನುಗಳ ದಾಖಲೆಗಳಿದೆ. ಅದೆಷ್ಟೇ ದೊಡ್ಡ ವ್ಯಕ್ತಿಯಾಗಿದ್ದರು ಕೂಡ ಕೊನೆಯ ತನಕವು ವಿಧೇಯತೆಯಿಂದ ನಾಯಕನೊಂದಿಗೆ ಹಾಗೂ ತನ್ನ ಸಹ ಆಟಗಾರರೊಂದಿಗೆ ಬೆರೆತು ನಲಿಯುತ್ತಿದ್ದರು. ಎಲ್ಲಿಯೂ ಕೂಡ ಸಿಟ್ಟನ್ನು ಹಾಗೂ ಮನಸ್ಸಿನ ಹಿಡಿತವನ್ನು ತಪ್ಪಿಸಿಕೊಂಡು ವ್ಯವಹರಿಸಿದ್ದಿಲ್ಲ. ತಾಳ್ಮೆ ಹಾಗೂ ವಿನಯದ ಸಾಕಾರ ಮೂರ್ತಿ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ಮುಂದೆ ಹಲಸಿನ ಬೀಜ ಬಿಸಾಡಬೇಡಿ! ಆರೋಗ್ಯಕ್ಕೆ ಬೆಟ್ಟದಷ್ಟು ಲಾಭ ನೀಡುವ ಗುಣವಿದೆ

ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಉಡುಪಿ: ಎರಡು ದಿನಗಳ ರೋಚಕ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸೆರೆ – ಗ್ರಾಮಸ್ಥರಿಗೆ ನಿಟ್ಟುಸಿರು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.