spot_img

ಮಧುಮೇಹಕ್ಕೆ ಮದ್ದು: ಪ್ರತಿದಿನ ಜೋಳದ ರೊಟ್ಟಿ ಸೇವನೆಯ ಪ್ರಯೋಜನವೇನು?

Date:

ಜೋಳದ ರೊಟ್ಟಿ ಪ್ರತಿದಿನ ಸೇವಿಸುವುದು ಆರೋಗ್ಯದ ಮೇಲೆ ಸಾಕಷ್ಟು ಹಿತಕರ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂಬುದನ್ನು ಪೌಷ್ಟಿಕತಜ್ಞರು ಒತ್ತಿಹೇಳುತ್ತಿದ್ದಾರೆ. ಜೋಳದಲ್ಲಿ ವಿಟಮಿನ್‌, ಖನಿಜಗಳು ಮತ್ತು ನಾರಿನಂಶ ಸಮೃದ್ಧವಾಗಿದ್ದು, ದೇಹದ ದೌರ್ಬಲ್ಯ ನಿವಾರಣೆಗೆ ಸಹಕಾರಿ.

ಜೋಳದ ನಾರಿನಂಶವು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಮಧುಮೇಹ ಹೊಂದಿರುವವರಿಗೆ ಇದು ಅತ್ಯಂತ ಉಪಯುಕ್ತ. ಇದರಲ್ಲಿ ಕಡಿಮೆ ಸೆಮಿಕ್ ಸೂಚ್ಯಂಕವಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ನೆರವಾಗುತ್ತದೆ. ಚಪಾತಿಗೆ ಬದಲಾಗಿ ಹಲವರು ಈಗ ಜೋಳದ ರೊಟ್ಟಿಯತ್ತ ಮಾರುಹೋಗುತ್ತಿದ್ದಾರೆ.

ಇದಲ್ಲದೆ, ಜೋಳದ ರೊಟ್ಟಿ ಮೂಳೆಗಳನ್ನು ಬಲಪಡಿಸಿ, ಜೀರ್ಣಕ್ರಿಯೆಯ ಸುಧಾರಣೆಗೆ ಸಹಾಯ ಮಾಡುತ್ತದೆ. ಮಲಬದ್ಧತೆ, ರಕ್ತಹೀನತೆ ಮುಂತಾದ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿ. ಜೋಳದಲ್ಲಿರುವ ಮೆನ್ನೀಸಿಯಮ್, ಕಬ್ಬಿಣ, ತಾಮ್ರ, ಕ್ಯಾಲ್ಸಿಯಂ ಇತ್ಯಾದಿ ಆರೋಗ್ಯ ಪುನಶ್ಚೇತನಕ್ಕೆ ಸಹಕಾರಿಯಾಗಿವೆ.

ಮೆಕ್ಕೆ ಜೋಳದ ರೊಟ್ಟಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ಹೊಟ್ಟೆ ತುಂಬಿದ ಅನುಭವ ಹೆಚ್ಚು ಸಮಯ ಉಳಿಯುತ್ತದೆ. ಇದು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಹೃದಯದ ಆರೋಗ್ಯಕ್ಕೂ ಇದು ಉತ್ತಮ ಆಯ್ಕೆ ಎನಿಸುತ್ತದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.