spot_img

ಪೇರಳೆ ಎಲೆಗಳ ಆರೋಗ್ಯ ಗుణಗಳು

Date:

ಪೇರಳೆ ಎಲೆಗಳು ಉತ್ಕರ್ಷಣ ನಿರೋಧಕಗಳು, ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಸೇರಿದಂತೆ ಹಲವು ಪೋಷಕಾಂಶಗಳನ್ನು ಒಳಗೊಂಡಿದೆ. ಈ ಎಲೆಗಳಲ್ಲಿ ಪ್ರೋಟೀನ್, ವಿಟಮಿನ್ C, ವಿಟಮಿನ್ B, ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೇಶಿಯಂ, ಪೊಟ್ಯಾಸಿಯಂ ಮತ್ತು ಹಲವಾರು ಜೀವಸತ್ವಗಳು ಅಡಕವಾಗಿದೆ.

ಪೇರಳೆ ಎಲೆಗಳ ಮಹತ್ವ ಮತ್ತು ಪ್ರಯೋಜನಗಳು:

ಮಧುಮೇಹ ನಿಯಂತ್ರಣ: ಪೇರಳೆ ಎಲೆಗಳಲ್ಲಿ ಫೀನಾಲಿಕ್ ಅಂಶವಿದ್ದು, ಇದು ಹೈಪರ್ಗ್ಲೈಸೆಮಿಕ್ ವಿರೋಧಿ ಗುಣ ಹೊಂದಿದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯವಾಗುತ್ತದೆ.

ರಕ್ತದೊತ್ತಡ ನಿಯಂತ್ರಣ: ಪೇರಳೆ ಎಲೆಗಳಲ್ಲಿರುವ ಪೊಟ್ಯಾಸಿಯಮ್ ಮತ್ತು ಫೈಬರ್ ಎಲೆಗಳು ಬಿಪಿ ನಿಯಂತ್ರಣಕ್ಕೆ ಸಹಾಯಕ.

ಕರಳು ಆರೋಗ್ಯ: ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳಿಂದ ಕರುಳಿನ ಆರೋಗ್ಯವನ್ನು ಸುಧಾರಿಸುತ್ತವೆ ಮತ್ತು ಜೀರ್ಣಕ್ರಿಯೆಗೆ ಉತ್ತಮ.

ಕಲೆ, ಮೊಡವೆ ನಿವಾರಣೆ: ಪೇರಳೆ ಎಲೆಯ ಕಷಾಯ ನೈಸರ್ಗಿಕ ರಕ್ತ ಶುದ್ಧೀಕರಕವಾಗಿದ್ದು, ಮುಖದ ಕಲೆ, ಮೊಡವೆ ನಿವಾರಣೆಗೆ ಸಹಕಾರಿಯಾಗುತ್ತದೆ.

ತೂಕ ಇಳಿಕೆ: ಪೇರಳೆ ಎಲೆಗಳಿಂದ ತಯಾರಿಸಿದ ಕಷಾಯ ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ಕರಗಿಸಿ ತೂಕ ಕಡಿಮೆ ಮಾಡುತ್ತದೆ.

ಮುನ್ನೆಚ್ಚರಿಕೆಗಳು:
ಪೇರಳೆ ಎಲೆಗಳನ್ನು ಸೇವಿಸುವ ಮೊದಲು ಮಿತವಾಗಿ ಸೇವನೆ ಮಾಡುವುದು ಸೂಕ್ತ. ಹೆಚ್ಚು ಸೇವನೆಯಿಂದ ಉಬ್ಬರು, ಗ್ಯಾಸ್ಸು ಅಥವಾ ಅತಿಸಾರ ಸಮಸ್ಯೆ ಉಂಟಾಗಬಹುದು. ಕೆಲವರಲ್ಲಿ ಅಲರ್ಜಿ ಅಥವಾ ತುರಿಕೆ ಉಂಟಾಗುವ ಸಾಧ್ಯತೆಯಿದೆ. ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ವೈದ್ಯರ ಸಲಹೆ ಪಡೆಯುವುದು ಉತ್ತಮ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ "ಸರಕಾರದ ನಡೆ, ಕಾರ್ಯಕರ್ತರ ಕಡೆ" ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.

ಉಜಿರೆಯಲ್ಲಿ ಅಕ್ರಮ ಕೂಟ, ಶಾಂತಿ ಭಂಗ: ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು!

ಉಜಿರೆಯಲ್ಲಿ ಶಾಂತಿ ಭಂಗ ಆರೋಪಕ್ಕೆ ಮಹೇಶ್ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕಾಂತಾವರ : ಎ.22 ರಿಂದ ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶ ವರ್ಧಂತಿ ಉತ್ಸವ ಹಾಗೂ ಪಗ್ಗು ಮಾರಿಪೂಜೆ.

ಎ.22 ರಿಂದ ಶ್ರೀ ಕ್ಷೇತ್ರ ಕೇಪ್ಲಾಜೆ ಮಹಾಮ್ಮಾಯಿ ದೇವಿಗುಡಿಯಲ್ಲಿ ಬ್ರಹ್ಮಕಲಶ ವರ್ಧಂತಿ ಉತ್ಸವ ಹಾಗೂ ಪಗ್ಗು ಮಾರಿಪೂಜೆಯು ಜರಗಲಿರುವುದು.