spot_img

ದಾಸವಾಳದ ಹೂವಿನಲ್ಲಿ ಅಸಂಖ್ಯ ಆರೋಗ್ಯ ಮೌಲ್ಯಗಳು: ಮಧುಮೇಹದಿಂದ ಕ್ಯಾನ್ಸರ್‌ವರೆಗೆ ಪರಿಹಾರ!

Date:

spot_img

ಪ್ರಕೃತಿಯ ಅತ್ಯದ್ಭುತ ಕೊಡುಗೆಗಳಲ್ಲಿ ಒಂದಾದ ದಾಸವಾಳ ಹೂವು ಕೇವಲ ಸೌಂದರ್ಯವನ್ನಷ್ಟೇ ನೀಡುವುದಲ್ಲದೆ, ಅದರಲ್ಲಿರುವ ಔಷಧೀಯ ಗುಣಲಕ್ಷಣಗಳಿಂದ ಅನೇಕ ಆರೋಗ್ಯ ಸಮಸ್ಯೆಗಳ ನಿವಾರಣೆಯಲ್ಲೂ ಮಹತ್ತರದ ಪಾತ್ರ ವಹಿಸುತ್ತದೆ.

ದಾಸವಾಳದ ಹೂವಿನಿಂದ ತಯಾರಿಸುವ ಚಹಾ ಮಧುಮೇಹ, ರಕ್ತದೊತ್ತಡ, ಸ್ಥೂಲಕಾಯ ಮತ್ತು ಯಕೃತ್ ಸಮಸ್ಯೆಗಳ ವಿರುದ್ಧ ಪರಿಣಾಮಕಾರಿ ಎಂದು ಹಲವಾರು ಅಧ್ಯಯನಗಳು ದೃಢಪಡಿಸಿವೆ. ಇದರಲ್ಲಿ ಹೈಪೋಗ್ಲೈಸೆಮಿಕ್ (ರಕ್ತದ ಸಕ್ಕರೆ ಇಳಿಸುವ) ಹಾಗೂ ಹೈಪೋಲಿಪಿಡೆಮಿಕ್ (ಕೆಟ್ಟ ಕೊಲೆಸ್ಟ್ರಾಲ್ ಇಳಿಸುವ) ಗುಣಲಕ್ಷಣಗಳು ಇವೆ.

ದಾಸವಾಳ ಹೂವಿನ ಸೇವನೆಯ ಲಾಭಗಳು :

ರಕ್ತದ ಸಕ್ಕರೆ ನಿಯಂತ್ರಣ: ಮಧುಮೇಹ ಇದ್ದವರು ನಿಯಮಿತವಾಗಿ ಸೇವಿಸಿದರೆ ಪ್ರಯೋಜನ.

ಕ್ಯಾನ್ಸರ್‌ ವಿರೋಧಿ: ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ ಪ್ರೊಟೊಕಾಟೆಚುಯಿಕ್ ಆಮ್ಲವನ್ನು ಹೊಂದಿದೆ.

ಯಕೃತ್ತಿಗೆ ರಕ್ಷಣೆ: ದಾಸವಾಳದ ಚಹಾ ಯಕೃತ್‌ಗೆ ಉಪಶಮನ ನೀಡುತ್ತದೆ, ವಿಶೇಷವಾಗಿ ಕೀಮೋಥೆರಪಿ ನಂತರ.

ಹೃದಯದ ರಕ್ಷಣೆಗೆ ಬೆಸ್ಟ್: ಕಾರ್ಡಿಯೋ ಪ್ರೊಟೆಕ್ಟಿವ್ ಗುಣಗಳಿಂದ ಹೃದಯದ ಕಾಯಿಲೆಗಳನ್ನು ತಡೆಯುತ್ತದೆ.

ತೂಕ ಇಳಿಕೆಗೆ ಸಹಾಯಕ: ದಾಸವಾಳದ ಸಾರ ಕೊಬ್ಬನ್ನು ಸಂಗ್ರಹಿಸದಂತೆ ತಡೆಯುತ್ತದೆ.

ಸ್ತ್ರೀಸಂಬಂಧಿ ಸಮಸ್ಯೆಗಳಿಗೆ ಪರಿಹಾರ: ಋತುಚಕ್ರದ ನೋವು ಮತ್ತು ಸೆಳೆತವನ್ನು ನಿವಾರಿಸುತ್ತದೆ.

ಮನಸ್ಸಿನ ನೆಮ್ಮದಿ: ಖಿನ್ನತೆ ನಿವಾರಣೆಗೆ ಸಹಾಯ ಮಾಡುತ್ತದೆ.

ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ದಾಸವಾಳ ಚಹಾ, ಪ್ರತಿದಿನದ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ದೇಹದ ಇಮ್ಯುನಿಟಿ ಹೆಚ್ಚಿಸಿ ಒಟ್ಟು ಆರೋಗ್ಯವನ್ನು ಸುಧಾರಿಸುತ್ತದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.

ತನಿಖೆಗೂ ಮುನ್ನ ಧರ್ಮಸ್ಥಳದ ತೇಜೋವಧೆ ಸಲ್ಲದು: ಸಿ.ಟಿ. ರವಿ ಎಚ್ಚರಿಕೆ!

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ನೇಮಕ ಮಾಡಿರುವುದನ್ನು ಸ್ವಾಗತಿಸುವುದಾಗಿ ಬಿಜೆಪಿ ನಾಯಕ ಸಿ.ಟಿ. ರವಿ ತಿಳಿಸಿದ್ದಾರೆ.

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಬೆಳಗಾವಿಯಲ್ಲಿ ಆತಂಕ!

ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಆಘಾತಕಾರಿ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಹತಾಶ ಮನಸ್ಥಿತಿಯ ಪ್ರಸಾದ್ ಕಾಂಚನ್ ಗೆ ಶಾಸಕರನ್ನು ಟೀಕಿಸುವ ನೈತಿಕತೆ ಇಲ್ಲ: ಪ್ರಭಾಕರ ಪೂಜಾರಿ

ಪ್ರಸಾದ್ ಕಾಂಚನ್ ಗೆ ಸದಾ ಕ್ಷೇತ್ರದ ಅಭಿವೃದ್ಧಿಯ ಕನಸನ್ನು ಹೊತ್ತು ಸಾರ್ಥಕ ಸೇವೆಗೈಯುತ್ತಿರುವ ಉಡುಪಿ ಶಾಸಕರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ.