spot_img

ಹಲಸು – ನೈಸರ್ಗಿಕ ಪೌಷ್ಟಿಕಾಂಶಗಳ ಶಕ್ತಿ ಕೇಂದ್ರ!

Date:

ಆರೋಗ್ಯವಂತ ಬದುಕಿಗೆ ಸರಿಯಾದ ಆಹಾರ ಸೇವನೆಯೇ ಮುಖ್ಯ. ಮಾಂಸದಂತಹ ಪ್ರೋಟೀನ್ ಮೂಲಗಳನ್ನು ಬಹುಪಾಲು ಜನರು ಆಯ್ಕೆಮಾಡುತ್ತಿದ್ದರೂ, ಹೆಚ್ಚು ಸೇವನೆ ದೇಹದಲ್ಲಿ ಕೊಬ್ಬನ್ನು ಶೇಖರಿಸಬಹುದು. ಈ ಸಮಸ್ಯೆಗೆ ಉತ್ತಮ ಪರ್ಯಾಯವೇ ಹಲಸಿನ ಹಣ್ಣು.

ಹಲಸಿನ ಹಣ್ಣು ಆರೋಗ್ಯದ ಖಜಾನೆ!
ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪ್ರೋಟೀನ್, ಫೈಬರ್, ವಿಟಮಿನ್ A, B, C, ಪೊಟ್ಯಾಸಿಯಂ, ಕಬ್ಬಿಣ ಮತ್ತು ಮ್ಯಾಂಗನೀಸ್ ಅಂಶಗಳಿವೆ. ಹೆಚ್ಚು ಪೋಷಕಾಂಶಗಳಿರುವುದರಿಂದ ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಮಧುಮೇಹಿಗಳಿಗೆ ವರದಾನ:
ಹಲಸು ಕಡಿಮೆ ಸೆಮಿಕ್ ಸೂಚ್ಯಂಕವನ್ನು ಹೊಂದಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಇದರಲ್ಲಿರುವ ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಫೈಬರ್ ಮಧುಮೇಹಿಗಳಿಗಾಗಿ ಅತ್ಯುತ್ತಮ ಆಯ್ಕೆ.

ಋತುಮಾನ ಬದಲಾವಣೆಯ ರಕ್ಷಕ:
ಹಲಸಿನಲ್ಲಿ ಇರುವ ವಿಟಮಿನ್ ಸಿ, ಶೀತ, ನೆಗಡಿ, ಜ್ವರ, ಕೆಮ್ಮು ಮುಂತಾದ ಸೋಂಕುಗಳನ್ನು ತಡೆಯಲು ನೆರವಾಗುತ್ತದೆ. ರೋಗ ನಿರೋಧಕ ಶಕ್ತಿಯನ್ನು ದ್ವಿಗುಣಗೊಳಿಸುತ್ತದೆ.

ಹೃದಯ ಆರೋಗ್ಯಕ್ಕೂ ನೆರವು:
ಹಲಸಿನಲ್ಲಿರುವ ಪೊಟ್ಯಾಸಿಯಂ ದೇಹದಲ್ಲಿನ ಸೋಡಿಯಂ ಮಟ್ಟವನ್ನು ಸಮತೋಲನಗೊಳಿಸಿ, ರಕ್ತದೊತ್ತಡ ನಿಯಂತ್ರಿಸಿ, ಹೃದಯದ ಕಾಯಿಲೆಗಳಿಂದ ದೂರವಿರಿಸುತ್ತದೆ.

ಕೂದಲಿಗಾಗಿ ಸಹ ಪರಿಣಾಮಕಾರಿ:
ವಿಟಮಿನ್ A ಸಮೃದ್ಧವಾಗಿರುವ ಹಲಸು, ಕೂದಲು ಗಟ್ಟಿಯಾಗಿಸಲು ಸಹಕಾರಿಯಾಗುತ್ತದೆ.

ಶಕ್ತಿದಾಯಕವೂ , ಸವಿಯಾದ ಆಹಾರವೂ ಆದ ಹಲಸಿನ ಹಣ್ಣಿನಲ್ಲಿರುವ ನೈಸರ್ಗಿಕ ಪೋಷಕಾಂಶಗಳು ದೇಹಕ್ಕೆ ಬೇಕಾದ ಶಕ್ತಿ ನೀಡುವ ಜೊತೆಗೆ, ರುಚಿಕರತೆಯಿಂದ ಆಹಾರದ ಸ್ವಾದವನ್ನೂ ಹೆಚ್ಚಿಸುತ್ತವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸಹಾಯಕ ಪ್ರಾಧ್ಯಾಪಕಿಯಾಗಿ ಆಯ್ಕೆಯಾದ ಡಾ. ಪೂರ್ಣಿಮಾ ಕೆ ಅವರಿಗೆ ಕೆಪಿಎಸ್ ಹಿರಿಯಡ್ಕದಲ್ಲಿ ಸನ್ಮಾನ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿಗೆ ಸಹಾಯಕ ಪ್ರಾಧ್ಯಾಪಕಿಯಾಗಿ ಸ್ಥಳ ನಿಯುಕ್ತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶ್ರೀಮತಿ ಪೂರ್ಣಿಮಾ ಕೆ ಇವರನ್ನು ಈ ದಿನ ಆತ್ಮೀಯವಾಗಿ ಸನ್ಮಾನಿಸಲಾಯಿತು.

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.