spot_img

4 ಗಂಟೆಗಳಲ್ಲಿ ಗಾಯ ಮರೆಸುವ ‘ಮ್ಯಾಜಿಕ್’ ಜೆಲ್: ವಿಜ್ಞಾನಿಗಳಿಂದ ಹೊಸ ಆವಿಷ್ಕಾರ

Date:

spot_img

ಗಾಯಗಳ ಗುಣಮುಖತೆಯಲ್ಲಿ ಕ್ರಾಂತಿಕಾರಿ ಆವಿಷ್ಕಾರವೆನಿಸಿದ ಹೊಸ ಹೈಡೋಜೆಲ್ ಅನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ. ಆತ್ಮ ವಿಶ್ವವಿದ್ಯಾಲಯ ಮತ್ತು ಬೇರೂತ್ ವಿಶ್ವವಿದ್ಯಾಲಯದ ಸಂಶೋಧಕರು ಮಾನವ ಚರ್ಮದ ಗುಣಗಳನ್ನು ಅನುಕರಿಸುವ ಈ ಸ್ವಯಂ-ಗುಣಪಡಿಸುವ ಹೈಡೋಜೆಲ್ ಅನ್ನು ಸಿದ್ಧಪಡಿಸಿದ್ದಾರೆ.

ಈ ವಿಶೇಷ ಜೆಲ್ ಕೇವಲ ನಾಲ್ಕು ಗಂಟೆಗಳಲ್ಲಿ 90% ಗಾಯಗಳನ್ನು ವಾಸಿ ಮಾಡಬಹುದು ಹಾಗೂ 24 ಗಂಟೆಗಳಲ್ಲಿ ಸಂಪೂರ್ಣ ಗುಣಮುಖ ಮಾಡುವುದು ಇದರ ವೈಶಿಷ್ಟ್ಯವಾಗಿದೆ. ಗಾಯದ ಆರೈಕೆ, ಪುನರುತ್ಪಾದಕ ಔಷಧ ಮತ್ತು ಕೃತಕ ಚರ್ಮದ ತಂತ್ರಜ್ಞಾನಕ್ಕೆ ಇದು ಹೊಸ ಸಮಾಧಾನ ನೀಡಲಿದೆ ಎಂದು ತಜ್ಞರು ತಿಳಿಸಿದ್ದಾರೆ.

ಈ ಸಂಶೋಧನೆಯ ವಿವರಗಳು ಮಾರ್ಚ್ 7ರಂದು ಪ್ರತಿಷ್ಠಿತ ‘ನೇಚರ್ ಮೆಟೀರಿಯಲ್ಸ್’ ಜರ್ನಲ್‌ನಲ್ಲಿ ಪ್ರಕಟವಾಗಿದೆ. ಈ ಜೆಲ್‌ನಲ್ಲಿ ನ್ಯಾನೋಶೀಟ್‌ಗಳ ನಡುವೆ ದಟ್ಟವಾಗಿ ಸಿಕ್ಕಿಹಾಕಿಕೊಂಡ ಪಾಲಿಮರ್‌ಗಳ ಬಳಕೆಯಿಂದ ಮೃದು ಮತ್ತು ಮೆತ್ತಗೆ ಇರುವ ಹೈಡೋಜೆಲ್ ಹೆಚ್ಚು ಸಂಘಟಿತ ರಚನೆಯನ್ನು ರೂಪಿಸುತ್ತದೆ.

ಈ ನವೀನ ಹೈಡೋಜೆಲ್ ಸುಟ್ಟ ಗಾಯಗಳು, ಶಸ್ತ್ರಚಿಕಿತ್ಸಾ ಬಳಿಕದ ಗಾಯಗಳು ಹಾಗೂ ದೀರ್ಘಕಾಲದ ಗಾಯಗಳಿಂದ ಬಳಲುವವರ ಚೇತರಿಕೆಗೆ ಹೊಸ ಆಶಾಕಿರಣವಾಗಿದೆ ಎಂದು ಹೇಳಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ಸು ಫ್ರಮ್‌ ಸೋ” ಅಬ್ಬರ: ಸಣ್ಣ ಬಜೆಟ್, ದೊಡ್ಡ ಕಲೆಕ್ಷನ್ – ಇದು ಕಂಟೆಂಟ್ ತಾಕತ್ತು!

ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್‌ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಉಡುಪಿಯಲ್ಲಿ ವರುಣನ ಆರ್ಭಟ: ಆಸ್ತಿಪಾಸ್ತಿಗೆ ಹಾನಿ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ

ಹರಿದ್ವಾರದಲ್ಲಿ ದುರಂತ: ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತ, 7 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದಲ್ಲಿರುವ ಪ್ರಸಿದ್ಧ ಮಾನಸಾ ದೇವಿ ದೇವಾಲಯದಲ್ಲಿ ಭಾನುವಾರ (ಜುಲೈ 27) ಸಂಭವಿಸಿದ ದುರದೃಷ್ಟಕರ ಕಾಲ್ತುಳಿತದಲ್ಲಿ ಏಳು ಭಕ್ತರು ಪ್ರಾಣ ಕಳೆದುಕೊಂಡಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ

ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ, ಸಂಚಾರ ಸ್ಥಗಿತ

ರಾಜ್ಯದಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ