spot_img

ದಿನ ವಿಶೇಷ – ಟಿಪ್ಪುವಿನ ಮೃತ್ಯು

Date:

spot_img

ಟಿಪ್ಪುವಿನ ಮೃತ್ಯು

ಮೈಸೂರಿನ ಇತಿಹಾಸದಲ್ಲಿ ಕರಾಳ ಅಧ್ಯಾಯವನ್ನು ತೋರಿಸಿದವ ಹೈದರಾಲಿಯ ಮಗ ಟಿಪ್ಪು. 1750 ನವಂಬರ್ 20 ರಂದು ಈಗಿನ ಬೆಂಗಳೂರಿನಲ್ಲಿ ಹುಟ್ಟಿದ್ದು. ತಂದೆ ಹೈದರಾಲಿ ಮೈಸೂರು ಒಡೆಯರ ಅನಂತರ ಮೋಸದಿಂದ ಅಧಿಕಾರವನ್ನು ಕೈವಶ ಹೈದರಾಲಿಯ ನಂತರ ತಂದೆಯ ಅಧಿಕಾರ ಟಿಪ್ಪುವಿನ ಕೈವಶವಾಯಿತು. ಈತನ ಅಧಿಕಾರ ಅವಧಿಯಲ್ಲಿ ಹಲವಾರು ಬದಲಾವಣೆಗಳನ್ನು ತಂದರೂ ಕೂಡ ಈತ ಕಟ್ಟ ಇಸ್ಲಾಂ ಅನುಸರಿಸುತ್ತಿದ್ದರಿಂದ ಹಿಂದೂಗಳನ್ನು ಒಳಗಿಂದೊಳಗೆ ಬಹಳ ದ್ವೇಷಿಸುತ್ತಿದ್ದ. ಅತ್ಯಂತ ಕಟ್ಟಾ ಮತೀಯನಾಗಿದ್ದ ಟಿಪ್ಪು ತನ್ನ ಆಡಳಿತ ಕಾಲದಲ್ಲಿ ಹಲವು ಊರುಗಳ ಹೆಸರುಗಳನ್ನು ಬದಲಾಯಿಸಿದ. ಮಂಗಳೂರು ಜಲಲಾಬಾದ್ ಆಯಿತು. ಮೈಸೂರು – ನಝರಾಬಾದ್, ಕಣ್ಣಾನೂರು – ಕುಸನಬಾದ್, ಗುಟ್ಟಿ – ಫೈಜ್ ಹಿಸ್ಸಾರ್, ಧಾರವಾಡ – ಖುರ್ಷಿದ್ ಸವಾಡ್, ದಿಂಡಿಗಲ್ – ಕಲಿಖಾಬಾದ್, ರತ್ನಗಿರಿ – ಮುಸ್ತಫಾಬಾದ್, ಕಲ್ಲಿಕೋಟೆ – ಇಸ್ಲಮಾಬಾದ್.. ಹೀಗೆ ಮೈಸೂರಿನ ಸುತ್ತಮುತ್ತಲಿನ ಜಾಗಗಳಿಗೆಲ್ಲ ಟಿಪ್ಪು ಮುಸ್ಲಿಮ್ ಹೆಸರುಗಳನ್ನು ಇಡುತ್ತಾ ಹೋದ.
ಟಿಪ್ಪು ಊರುಗಳ ಹೆಸರುಗಳನ್ನು ಬದಲಿಸಿದ್ದು ಮಾತ್ರವಲ್ಲ; ದೂರವನ್ನು ಅಳೆಯುವ ಅಳತೆ ಮತ್ತು ಮಾನದಲ್ಲಿಯೂ ಇಸ್ಲಾಂ ಮತವನ್ನು ತುರುಕಿದ. ಖುರಾನಿನ ಒಂದು ಸಾಲು (ಕಲ್ಮಾ) ಇಪ್ಪತ್ತನಾಲ್ಕು ಅಕ್ಷರಗಳನ್ನು ಹೊಂದಿದೆಯೆಂಬ ಕಾರಣಕ್ಕೆ 24 ಅಂಗುಲಗಳ ಉದ್ದವನ್ನು ಮೂಲಮಾನವಾಗಿ ಇಟ್ಟುಕೊಂಡ. ಉಳಿದೆಲ್ಲ ಅಳತೆಗಳೂ ಇದಕ್ಕೆ ತಕ್ಕಂತೆ ಬದಲಾದವು.


ಪ್ರವಾದಿ ಮುಹಮ್ಮದರು ಹುಟ್ಟಿದ ವರ್ಷದಿಂದ ಆರಂಭಿಸಿ ಹೊಸ ಶಕೆಯೊಂದನ್ನು ಆರಂಭಿಸಿ, ಹೊಸ ಬಗೆಯ ಪಂಚಾಂಗವನ್ನು ಟಿಪ್ಪು ಜಾರಿಗೆ ತಂದ. ಸೌರಮಾನ ಪದ್ಧತಿಯನ್ನು ಕೈಬಿಟ್ಟು ಚಾಂದ್ರಮಾನ ಪದ್ಧತಿ ಅನುಸರಿಸಲು ಆದೇಶ ಹೊರಡಿಸಲಾಯಿತು. ಟಿಪ್ಪು ಪ್ರಾರಂಭಿಸಿದ ವರ್ಷದಲ್ಲಿ 354 ದಿನಗಳಿದ್ದವು. ವರ್ಷಗಳಿಗೆ ಅಹಂದ್, ಅಬ್, ಝಾ, ಬಾಬ್ ಮುಂತಾದ ಇಸ್ಲಾಮಿಕ್ ಹೆಸರುಗಳನ್ನು ಕೊಡಲಾಯಿತು. ಆದರೆ ತನ್ನ ಅಧಿಕಾರ ಹಾಗೂ ಅರಮನೆಯನ್ನು ಕಾಪಾಡಿಕೊಳ್ಳಲು ಆಂಗ್ಲರೊಂದಿಗೆ ಬಹಳಷ್ಟು ಹೋರಾಟವನ್ನು ಮಾಡಿ ಆಂಗ್ಲರಪಾಲಿಗೆ ಸಿಂಹ ಸ್ವಪ್ನದಂತಿದ್ದ. ಕೊನೆಯ ಕಾಲದಲ್ಲಿ ಆಂಗ್ಲ -ಮೈಸೂರು ಯುದ್ಧದ ಸಂದರ್ಭದಲ್ಲಿ 1799 ಮೇ 4ರಂದು ಈತ ಮರಣವನ್ನಪ್ಪುತ್ತಾನೆ. ಈತನ ಮರಣದ ಬಗ್ಗೆಯೂ ಕೂಡ ನಿಖರವಾದ ಮಾಹಿತಿಗಳಿಲ್ಲ. ಯಾರು ಕೊಂದರು ಎನ್ನುವುದು ನಿಗೂಢವಾಗಿಯೇ ಉಳಿಯಿತು..

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

40 ದಾಟಿದವರ ಸಂಧು ನೋವಿಗೆ ಆಯುರ್ವೇದದಲ್ಲಿದೆ ಪರಿಣಾಮಕಾರಿ ಪರಿಹಾರ!

ವಯಸ್ಸು 40 ದಾಟಿದಂತೆ ಕಾಣಿಸಿಕೊಳ್ಳುವ ಸಂಧು ನೋವು ಅದೆಷ್ಟೋ ಜನರನ್ನು ಕಾಡುತ್ತದೆ.

ವಾಟ್ಸಾಪ್‌ನಿಂದ ಹೊಸ AI ವೈಶಿಷ್ಟ್ಯ ‘ಕ್ವಿಕ್ ರಿಕ್ಯಾಪ್’: ಇನ್ನು ಮಿಸ್ಡ್ ಮೆಸೇಜ್ ಚಿಂತೆ ಇಲ್ಲ!

ಮೆಟಾ ಕಂಪನಿಯು ಅಭಿವೃದ್ಧಿಪಡಿಸಿರುವ ವಾಟ್ಸಾಪ್ ಕ್ವಿಕ್ ರಿಕ್ಯಾಪ್ AI (WhatsApp Quick Recap AI) ಎಂಬ ನೂತನ ಕೃತಕ ಬುದ್ಧಿಮತ್ತೆ ಆಧಾರಿತ ವೈಶಿಷ್ಟ್ಯವು, ಬಳಕೆದಾರರು ಗ್ರೂಪ್‌ಗಳು ಅಥವಾ ವೈಯಕ್ತಿಕ ಚಾಟ್‌ಗಳಲ್ಲಿ ಮಿಸ್ ಮಾಡಿಕೊಂಡ ಸಂದೇಶಗಳನ್ನು ಸರಳ ಮತ್ತು ಅರ್ಥಪೂರ್ಣವಾಗಿ ಸಂಕ್ಷಿಪ್ತಗೊಳಿಸಲು ನೆರವಾಗಲಿದೆ.

ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.

ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರದ ಪ್ರಯುಕ್ತ ಇಂದಿನಿಂದ ಆರಂಭಗೊಂಡ ಅಷ್ಟಮಂಗಲ ಪ್ರಶ್ನಾ ಚಿಂತನೆ

ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.