spot_img

ದಿನ ವಿಶೇಷ – ಹುತಾತ್ಮರ ದಿನ

Date:

ಹುಟ್ಟು ಸಾಮಾನ್ಯವಾಗಿರುತ್ತದೆ. ಆದರೆ ಸಾವು ಅಸಾಮಾನ್ಯವಾಗಿರಬೇಕು ಎನ್ನುವುದನ್ನು ತೋರಿಸಿಕೊಟ್ಟವ ಭಗತ್ ಸಿಂಗ್. 1931ರ ಇದೇ ದಿವಸ ಗಲ್ಲು ಶಿಕ್ಷೆಗೆ ಒಳಗಾದದ್ದು.ಇವರ ಒಟ್ಟಿಗೆ ಗೆಳೆತನದ ಪ್ರಭಾವಕ್ಕೆ ಒಳಗಾದ ಸುಖದೇವ್, ಹಾಗೂ ರಾಜಗುರು ಕೂಡ ಇತಿಹಾಸವಾಗಿದ್ದಾರೆ. ಯಾರ ಒಟ್ಟಿಗೆ ನಮ್ಮ ಗೆಳೆತನ ಸಾಗುತ್ತದೆಯೋ ಆ ದಿಕ್ಕಿನಲ್ಲಿ ನಮ್ಮ ಜೀವನ ಸಾಗುತ್ತದೆ ಎನ್ನುವುದಕ್ಕೆ ಇವರುಗಳು ಸಾಕ್ಷಿ. ಬೆಳ್ಳ ಬೆಳಗ್ಗೆ ಎಲ್ಲರೂ ಏಳುವುದಕ್ಕೆ ಮುಂಚೆ ಬ್ರಿಟಿಷರು ಇವರಿಗೆ ಗಲ್ಲು ಶಿಕ್ಷೆಯನ್ನು ಕೊಟ್ಟು ಸೇಟ್ಲೇಜ್ ನದಿಯ ದಡದಲ್ಲಿ ಶವ ಸಂಸ್ಕಾರ ಬಂದು ಮಾಡುತ್ತಿದ್ದರು. ಅಷ್ಟರಲ್ಲಿ ಜನಗಳಿಗೆ ಗೊತ್ತಾಗಿ ಗುಂಪು ಗುಂಪಾಗಿ ಬರತೊಡಗಿದ್ದನ್ನು ಕಂಡು ಅಲ್ಲಿಂದ ಕೂಡಲೆ ಕಾಲ್ಕಿತ್ತರು. ಸಾಯುವಾಗ ಯಾರು ಇಲ್ಲದಿದ್ದರೂ ಕೂಡ ಸತ್ತ ಮೇಲೆ ಇಡೀ ದೇಶ ಕಣ್ಣೀರಿಟ್ಟಿತು.

ಕೊನೆಯ ಕ್ಷಣದಲ್ಲಿ ನಾಲ್ಕು ಜನರಾದರೂ ನಮ್ಮೊಂದಿಗಿರಬೇಕು ಎನ್ನುವಂತೆ ಬದುಕಬೇಕು ಎನ್ನುವ ಮಾತನ್ನು ಕೇಳಿದ್ದೇವೆ, ಆದರೆ ಕೊನೆಯ ಕ್ಷಣದಲ್ಲಿ ಯಾರು ಇಲ್ಲದಿದ್ದರೂ ಕೂಡ ಸತ್ತ ಮೇಲೆ ವಿಷಯ ತಿಳಿದು ಇಡೀ ದೇಶ ಇವತ್ತಿಗೂ ಬೇಸರಿಸುತ್ತಿದೆ. ಸಾಯುವ ಕ್ಷಣದಲ್ಲಿರುವ ಜನ ಮುಖ್ಯವಲ್ಲ, ಸತ್ತ ಮೇಲೆ ಎಷ್ಟು ಜನ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ ಎನ್ನುವುದು ಮುಖ್ಯ. 24ನೇ ವಯಸ್ಸಿನಲ್ಲಿ ಭಗತ್ ಸಿಂಗ್ ತನ್ನ ಹೋರಾಟವನ್ನು ಮಾತ್ರವಲ್ಲ ಜೀವನವನ್ನೇ ಮುಕ್ತಾಯಗೊಳಿಸಿದ್ದು. ಆದರೆ ಭಾರತದ ಸ್ವಾತಂತ್ರ್ಯದ ಚರಿತ್ರೆಯಲ್ಲಿ ಆತ ಅಮರ. ಆ ಕಾರಣಕ್ಕಾಗಿ ಈ ದಿವಸ ಹುತಾತ್ಮರ ದಿನ ಎಂದು ಈ ದೇಶ ಆಚರಿಸುತ್ತಿದೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ಮುಂದೆ ಹಲಸಿನ ಬೀಜ ಬಿಸಾಡಬೇಡಿ! ಆರೋಗ್ಯಕ್ಕೆ ಬೆಟ್ಟದಷ್ಟು ಲಾಭ ನೀಡುವ ಗುಣವಿದೆ

ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಉಡುಪಿ: ಎರಡು ದಿನಗಳ ರೋಚಕ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸೆರೆ – ಗ್ರಾಮಸ್ಥರಿಗೆ ನಿಟ್ಟುಸಿರು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.