spot_img

ಹಾಗಲಕಾಯಿಯ ಆರೋಗ್ಯ ರಹಸ್ಯ!

Date:

ಆಹಾರ ಪಟ್ಟಿಯಿಂದ ಬಹುತೇಕ ಜನರು ದೂರ ಇಡುವ ತರಕಾರಿ ಎಂದರೆ ಹಾಗಲಕಾಯಿ. ತೀಕ್ಷ್ಣ ಕಹಿತನದಿಂದ ಜನರಲ್ಲಿ ಅದನ್ನು ಸೇವಿಸುವ ಆಸಕ್ತಿ ಕಡಿಮೆ ಇದ್ದರೂ, ಅದರಲ್ಲಿರುವ ಆರೋಗ್ಯ ಲಾಭಗಳು ವೈಜ್ಞಾನಿಕವಾಗಿ ಸಾಬೀತಾಗಿದೆ. ಅಧ್ಯಯನಗಳ ಪ್ರಕಾರ, ಮಧುಮೇಹ ನಿಯಂತ್ರಣ, ರಕ್ತ ಶುದ್ಧೀಕರಣ, ಹೃದಯ ಆರೋಗ್ಯ, ಚರ್ಮ-ಕೂದಲು ಕಾಳಜಿಗೆ ಹಾಗಲಕಾಯಿ ಮಹತ್ವದ ಪಾತ್ರ ವಹಿಸುತ್ತದೆ.

ಹಾಗಲಕಾಯಿಯಿಂದ ಲಭ್ಯವಾಗುವ ಮುಖ್ಯ ಪ್ರಯೋಜನಗಳು:

  • ಮಧುಮೇಹ ನಿಯಂತ್ರಣ: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 30 ಮಿ.ಲೀ. ಹಾಗಲಕಾಯಿ ಜ್ಯೂಸ್ ಸೇವನೆಯಿಂದ ಬಹುತೇಕ ಫಲವತ್ತಾದ ಪರಿಣಾಮ.
  • ರಕ್ತ ಶುದ್ಧೀಕರಣ: ಟಾಕ್ಸಿನ್‌ಗಳನ್ನು ದೇಹದಿಂದ ಹೊರಹಾಕಿ, ಚರ್ಮದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.
  • ಯಕೃತ್ ಸುರಕ್ಷೆ: ಆಲ್ಕೋಹಾಲ್ ಸೇವನೆಯಿಂದ ಉಂಟಾಗುವ ಯಕೃತ್ ಹಾನಿಯನ್ನು ತಡೆಯುತ್ತದೆ.
  • ಕೊಲೆಸ್ಟ್ರಾಲ್ ನಿಯಂತ್ರಣ: ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ ಹೃದಯಾಘಾತ, ಪಾರ್ಶ್ವವಾಯು ಅಪಾಯದಿಂದ ರಕ್ಷಿಸುತ್ತದೆ.
  • ರೋಗ ನಿರೋಧಕ ಶಕ್ತಿ: ಸೋಂಕುಗಳಿಗೆ ತಡೆ ನೀಡುವ ರಕ್ಷಕ ಶಕ್ತಿ ಹೆಚ್ಚಿಸುತ್ತದೆ.
  • ಚರ್ಮ-ಕೂದಲು ಆರೋಗ್ಯ: ಮೊಡವೆ, ಬೊಕ್ಕೆ ನಿವಾರಣೆ ಹಾಗೂ ಕೂದಲು ಉದುರುವಿಕೆಗೆ ಶಮನ ನೀಡುತ್ತದೆ.

ಹಾಗಲಕಾಯಿ ಜ್ಯೂಸ್ ತಯಾರಿಸುವ ವಿಧಾನ:

ಹಾಗಲಕಾಯಿ ತೊಳೆಯಿರಿ, ಸಿಪ್ಪೆ ತೆಗೆಯಿರಿ, ಬೀಜ ತೆಗೆದು ತುಂಡು ಮಾಡಿ.

ಸ್ವಲ್ಪ ಉಪ್ಪು ಹಾಕಿ ನೀರಿನಲ್ಲಿ 10 ನಿಮಿಷ ನೆನೆಸಿಡಿ.

ನಂತರ ಮಿಕ್ಸರ್‌ನಲ್ಲಿ ನೀರು ಸೇರಿಸಿ ಚೆನ್ನಾಗಿ ರುಬ್ಬಿ ಜ್ಯೂಸ್ ತಯಾರಿಸಬಹುದು.

ಎಚ್ಚರಿಕೆ:

  • ಒಂದು ದಿನಕ್ಕೆ 30 ಮಿ.ಲೀ.ಗಿಂತ ಹೆಚ್ಚು ಸೇವನೆ ಬೇಡ.
  • ಗರ್ಭಿಣಿಯರು ಸೇವನೆ ಮಾಡುವ ಮುನ್ನ ವೈದ್ಯರ ಸಲಹೆ ಪಡೆಯಬೇಕು.
  • ಅತಿಯಾದ ಸೇವನೆಯಿಂದ ಹೊಟ್ಟೆನೋವು, ಅತಿಸಾರ ಉಂಟಾಗಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.